ವಿಶ್ವವಿದ್ಯಾಲಯ ಕಲಾ ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ವತಿಯಿಂದ ಗುರುವಾರ ಆಯೋಜಿಸಿದ್ದ ‘ವಿದ್ವತ್ ಬರವಣಿಗೆ ಮತ್ತು ಸಂಶೋಧನೆಯಲ್ಲಿ ನೈತಿಕತೆ’ ಕುರಿತ ರಾಷ್ಟ್ರ ಮಟ್ಟದ ಕಾರ್ಯಾಗಾರವನ್ನು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಉದ್ಘಾಟಿಸಿದರು. ಪ್ರೊ. ಬಿ. ಟಿ. ಸಂಪತ್ ಕುಮಾರ್, ಪ್ರೊ. ಬಿ. ಕರಿಯಣ್ಣ, ಡಾ. ಎಸ್. ಸುಮಾದೇವಿ ಇದ್ದಾರೆ.
ವಿವಿ ವಿಜ್ಞಾನ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ‘ಕ್ರೀಡೆ, ಯೋಗ ಮತ್ತು ಆರೋಗ್ಯದ ಮೇಲೆ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಭಾವ’ ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಉದ್ಘಾಟಿಸಿದರು. ಡಾ. ಜೆರಾಲ್ಡ್ ಸಂತೋಷ್ ಡಿಸೋಜ, ಪ್ರೊ. ಪ್ರಕಾಶ್ ಎಂ. ಶೇಟ್, ಡಾ. ಎ. ಎಂ. ಮಂಜುನಾಥ್ ಇದ್ದಾರೆ.
ತುಮಕೂರು ವಿಶ್ವವಿದ್ಯಾನಿಲಯ ಬುಧವಾರ ಆಯೋಜಿಸಿದ್ದ 21ನೆಯ ಸಂಸ್ಥಾಪನಾ ದಿನಾಚರಣೆಯಲ್ಲಿ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಪ್ರೊ. ಪ್ರಸನ್ನಕುಮಾರ್ ಕೆ., ಪ್ರೊ. ಬಿ. ಶೇಖರ್, ಪ್ರೊ. ಮನೋಹರ್ ಶಿಂಧೆ, ಡಾ. ಎ. ಎಂ. ಮಂಜುನಾಥ್ ಇದ್ದಾರೆ.
Inauguration of World Social Day held on on 19-03-2024. Inaugurated by Sri P R Basavaraju, NIPM, National General Secretary.
ಆಂಧ್ರಪ್ರದೇಶದ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಅಟಲ್ ಇನ್ಕ್ಯೂಬೇಶನ್ ಕೇಂದ್ರವು ನೀಡುವ ‘ಬೆಸ್ಟ್ ಸ್ಟಾರ್ಟಪ್ ಇಕೋಸಿಸ್ಟಮ್’ ಪ್ರಶಸ್ತಿಗೆ ತುಮಕೂರು ವಿಶ್ವವಿದ್ಯಾನಿಲಯವು ಭಾಜನವಾಗಿದೆ. ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಅಟಲ್ ಇನ್ನೋವೇಶನ್ ಮಿಷನ್ ಸಿಇಒ ರಮಣನ್ ರಾಮನಾಥನ್ ಪ್ರಶಸ್ತಿ ಪ್ರದಾನ ಮಾಡಿದರು.