ವಿವಿಯ ಹಿಂದುಳಿದ ವರ್ಗಗಳ ಕೋಶ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕೋಶದ ವತಿಯಿಂದ ಆಯೋಜಿಸಿದ್ದ ಎರಡು ದಿನಗಳ ನಾಗರಿಕ ಸೇವಾ ಪರೀಕ್ಷೆಗಳ ತರಬೇತಿ ಕಾರ್ಯಾಗಾರವನ್ನು ಇನ್ಸೈಟ್ ಐಎಎಸ್ ಅಕಾಡೆಮಿ ಸಂಸ್ಥಾಪಕ ನಿರ್ದೇಶಕ ವಿನಯ್ ಕುಮಾರ್ ಜಿ. ಬಿ. ಉದ್ಘಾಟಿಸಿದರು. (12-07-2024)
ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಬೆಂಗಳೂರಿನ ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಹಾಗೂ ತುಮಕೂರು ಜಿಲ್ಲಾ ಚೇಂಬರ್ಸ್ ಆಫ್ ಕಾಮರ್ಸ್ ಇವರ ಸಹಯೋಗದಲ್ಲಿ ವಾಣಿಜ್ಯಶಾಸ್ತ್ರ ಅಧ್ಯಯನ ಮತ್ತು ಮಾಹಿತಿ ವ್ಯವಸ್ಥೆ ಅಧ್ಯಯನ ವಿಭಾಗಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಏಳು ದಿನಗಳ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಉದ್ಘಾಟಿಸಿದರು. ನಾಹಿದಾ ಜಮ್ ಜಮ್, ಪ್ರೊ. ಬಿ. ಶೇಖರ್, ಪ್ರೊ. ಪರಮಶಿವಯ್ಯ, ಟಿ. ಜೆ. ಗಿರೀಶ್, ಅಭಿಷೇಕ್ ಬಿ. ಎ., ಶ್ರವಣ್, ರವಿಶಂಕರ್ ಇದ್ದಾರೆ. (11-07-2024)
ಪ್ರೊ. ಎಂ. ಡಿ. ನಂಜುಂಡಸ್ವಾಮಿ ಅಧ್ಯಯನ ಪೀಠ ಮತ್ತು ಸ್ನಾತಕೋತ್ತರ ಅರ್ಥಶಾಸ್ತ್ರ ಅಧ್ಯಯನ ವಿಭಾಗವು ಆಯೋಜಿಸಿದ್ದ ‘ಭಾರತದ ಸಮಾಜವಾದಿ ಚಳುವಳಿಯಲ್ಲಿ ಪ್ರೊ. ಎಂ. ಡಿ. ನಂಜುಂಡಸ್ವಾಮಿ ಅವರ ಪಾತ್ರ’ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಉದ್ಘಾಟಿಸಿದರು. ಡಾ. ಮೋಹನ್ ಚಂದ್ರಗುತ್ತಿ ಇದ್ದಾರೆ. (09-07-2024)
ವಿವಿಯ ಡಿವಿಜಿ ಕನ್ನಡ ಅಧ್ಯಯನ ಕೇಂದ್ರವು ಆಯೋಜಿಸಿದ್ದ ಪ್ರೊ. ಎಸ್. ಜಿ. ಸಿದ್ದರಾಮಯ್ಯ ಅವರ ಆತ್ಮಕಥನ ‘ಯರೆಬೇವು’ ಕುರಿತ ಸಂವಾದ ಕಾರ್ಯಕ್ರಮವನ್ನು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಉದ್ಘಾಟಿಸಿದರು. ಸಾಹಿತಿ ಪ್ರೊ. ಎಸ್. ಜಿ. ಸಿದ್ದರಾಮಯ್ಯ, ಪ್ರೊ. ಪ್ರಸನ್ನ ಕುಮಾರ್ ಕೆ., ಪ್ರೊ. ನಿತ್ಯಾನಂದ ಬಿ. ಶೆಟ್ಟಿ ಇದ್ದಾರೆ (09-07-2024)
ತುಮಕೂರು ವಿಶ್ವವಿದ್ಯಾನಿಲಯದ ಡಾ. ಬಾಬು ಜಗಜೀವನ ರಾಮ್ ಅಧ್ಯಯನ ಪೀಠವು ಆಯೋಜಿಸಿದ್ದ ಡಾ. ಬಾಬು ಜಗಜೀವನ ರಾಮ್ ಅವರ 38ನೇ ಪುಣ್ಯಸ್ಮರಣೆಯಲ್ಲಿ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಡಾ. ಬಾಬು ಜಗಜೀವನ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕುಲಸಚಿವೆ ನಾಹಿದಾ ಜಮ್ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನ ಕುಮಾರ್ ಕೆ. ಹಾಗೂ ಇತರರು ಇದ್ದಾರೆ.(06-07-2024)
ತುಮಕೂರು ವಿಶ್ವವಿದ್ಯಾನಿಲಯದ ಕೌಶಲ್ಯಾಭಿವೃದ್ಧಿ ಘಟಕ ಹಾಗೂ ನೇಮಕಾತಿ ಕೋಶವು ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಉದ್ಯೋಗ ನೇಮಕಾತಿ ಅಭಿಯಾನದ ಸಂದರ್ಭದಲ್ಲಿ ವಿವಿ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಕುಲಸಚಿವೆ ನಾಹಿದಾ ಜಮ್ ಜಮ್, ಕೌಶಲ್ಯಾಭಿವೃದ್ಧಿ ಘಟಕ ಹಾಗೂ ನೇಮಕಾತಿ ಕೋಶದ ಮುಖ್ಯಸ್ಥ ಪ್ರೊ. ಪರಶುರಾಮ ಕೆ. ಜಿ., ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ನ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಆನಂದ್ ಎಸ್., ಮಾನವ ಸಂಪನ್ಮೂಲ ವಿಭಾಗದ ವ್ಯವಸ್ಥಾಪಕಿ ಶ್ರೇಯಾ, ಉಪ ವ್ಯವಸ್ಥಾಪಕ ರಾಮು ಕೆ. ಇದ್ದಾರೆ. (05-07-2024)
ತುಮಕೂರು ವಿವಿ ಸ್ನಾತಕೋತ್ತರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳು ಆಯೋಜಿಸಿದ್ದ ‘ಸಂವಿಧಾನ ಪೀಠಿಕೆ ಫಲಕಗಳ ಅನಾವರಣ’ ಕಾರ್ಯಕ್ರಮವನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ ಉದ್ಘಾಟಿಸಿದರು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಪ್ರೊ. ಪ್ರಸನ್ನ ಕುಮಾರ್ ಕೆ., ದೇವರಾಜ್, ಪ್ರೊ. ಕೇಶವ, ಪ್ರೊ. ರಮೇಶ್ ಬಿ., ಪ್ರೊ. ಬಸವರಾಜ ಜಿ., ಸುರೇಶ್ ಜಿ. ಆರ್. ಹಾಗೂ ಇತರರು ಇದ್ದಾರೆ.(04-07-2024)
ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ವಿವಿ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಹಾಗೂ ರೋಟರಿ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ಕನ್ನಡ ಪತ್ರಿಕಾ ದಿನಾಚರಣೆಯನ್ನು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಉದ್ಘಾಟಿಸಿದರು. ನಾಹಿದಾ ಜಮ್ ಜಮ್, ಸಿ. ಜಿ. ಮಂಜುಳಾ, ಶಿಲ್ಪ ಸಂಜಯ್, ಪ್ರೊ. ಬಿ. ಕರಿಯಣ್ಣ, ರೊ. ರಾಜೇಶ್ವರಿ ರುದ್ರಪ್ಪ, ಡಾ. ಎಸ್. ಎಲ್. ಶಿವಶಂಕರ ಕಾಡದೇವರಮಠ್, ರೊ. ನಾಗಮಣಿ ಎಸ್. ಜಿ., ಲಕ್ಕಪ್ಪ ಇದ್ದಾರೆ. (01-07-2024)