ವಿವಿ ವಿಜ್ಞಾನ ಕಾಲೇಜು ಆಯೋಜಿಸಿರುವ ‘ಸೃಜನ-2024’ ಕಾಲೇಜು ವಾರ್ಷಿಕೋತ್ಸವದ ಉದ್ಘಾಟನೆಯನ್ನು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ನೆರವೇರಿಸಿದರು. ನಾಹಿದಾ ಜಮ್ ಜಮ್, ರಾಘವೇಂದ್ರ ಆಚಾರ್ಯ, ಪ್ರೊ. ಪ್ರಕಾಶ್ ಎಂ. ಶೇಟ್, ಡಾ. ವೆಂಕಟರೆಡ್ಡಿ ರಾಮರೆಡ್ಡಿ, ಡಾ. ರಾಮಕೃಷ್ಣ ಜಿ., ಡಾ. ಎ. ಎಂ. ಮಂಜುನಾಥ ಇದ್ದಾರೆ. (26-07-2024)
ತುಮಕೂರು ವಿಶ್ವವಿದ್ಯಾನಿಲಯ ವಾಣಿಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಗುರುವಾರ ಆಯೋಜಿಸಿದ್ದ ‘ಅವಿನ್ಯ’ ರಾಜ್ಯಮಟ್ಟದ ವಾಣಿಜ್ಯ ಉತ್ಸವವನ್ನು ಕೈಗಾರಿಕೋದ್ಯಮಿ ಎಚ್. ಜಿ. ಚಂದ್ರಶೇಖರ್ ಉದ್ಘಾಟಿಸಿದರು. ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ನಾಹಿದಾ ಜಮ್ ಜಮ್, ರಣವ್ ಕ್ಷೀರ್ಸಾಗರ್, ಪ್ರೊ. ಪ್ರಸನ್ನಕುಮಾರ್ ಕೆ., ಪ್ರೊ. ಬಿ. ಶೇಖರ್, ಪ್ರೊ. ಪಿ. ಪರಮಶಿವಯ್ಯ, ಪ್ರೊ. ಜಿ. ಸುದರ್ಶನ ರೆಡ್ಡಿ, ಪ್ರೊ. ಬಿ. ಕೆ. ಸುರೇಶ್ ಇದ್ದಾರೆ. (26-07-2024)
ತುಮಕೂರು ವಿವಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಘಟಕ, ಕೌಶಲ್ಯಾಭಿವೃದ್ಧಿ ಘಟಕ, ವಿವಿ ವಿಜ್ಞಾನ ಕಾಲೇಜು ಹಾಗೂ ಸ್ನಾತಕೋತ್ತರ ವಿಭಾಗಗಳ ವತಿಯಿಂದ ಬುಧವಾರ ಆಯೋಜಿಸಿದ್ದ ಪ್ರೇರಣಾ ಉಪನ್ಯಾಸ ಕಾರ್ಯಕ್ರಮವನ್ನು ನಿವೃತ್ತ ಪ್ರಾಧ್ಯಾಪಕ ಪ್ರೊ. ಎಂ. ಕೃಷ್ಣೇಗೌಡ ಉದ್ಘಾಟಿಸಿದರು. (24-07-2024)
ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಅವರು ತಮ್ಮ ಅಧಿಕಾರ ಅವಧಿಯ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ವಿವಿ ಸಿಬ್ಬಂದಿಯೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. (23-07-2024)
ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಆಯೋಜಿಸಿರುವ ‘ವಿಕಸಿತ್ ಭಾರತ್@2047: ಭಾರತದ ಸಮಗ್ರ ಅಭಿವೃದ್ಧಿಯಲ್ಲಿ ಡಿಜಿಟಲ್ ರೂಪಾಂತರ ಮತ್ತು ಮಾಧ್ಯಮ ಸಂಗಮದ ಪಾತ್ರ’ ಕುರಿತ ಬಹುಶಿಸ್ತೀಯ ರಾಷ್ಟ್ರೀಯ ಸಮ್ಮೇಳನ ಹಾಗೂ ‘ಇಂಪ್ರೆಶನ್-2024’ ಮಾಧ್ಯಮ ಹಬ್ಬದ ಉದ್ಘಾಟನೆಯಲ್ಲಿ ಪ್ರೊ. ಕೆ. ವಿ. ನಾಗರಾಜ್, ಪ್ರೊ. ಎಂ. ವೆಂಕಟೇಶ್ವರಲು, ಹರಿಪ್ರಸಾದ್ ಎ., ಪ್ರೊ. ಬಿ. ಕೆ. ರವಿ, ಪ್ರೊ. ಬಿಪ್ಲಬ್ ಲೋಹೋ ಚೌಧರಿ, ಪ್ರೊ. ಉಪೇಂದ್ರ ಪಾಢಿ, ಇದ್ದಾರೆ. (19-07-2024)
ತುಮಕೂರು ವಿವಿ, ಕಲಾ ಕಾಲೇಜು, ಪೊಲೀಸ್ ಬೇಟೆ ಕನ್ನಡ ವಾರ ಪತ್ರಿಕೆ ಇವರ ಸಹಯೋಗದಲ್ಲಿ ಆಯೋಜಿಸಿದ್ದ ‘ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ಯುವಜನರ ಪಾತ್ರ’ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಭಾರತ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಎನ್. ಸಂತೋಷ ಹೆಗ್ಡೆ ಉದ್ಘಾಟಿಸಿದರು. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಇದ್ದಾರೆ. (18-07-2024)
ವಿವಿಯ ಹಿಂದುಳಿದ ವರ್ಗಗಳ ಕೋಶ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕೋಶದ ವತಿಯಿಂದ ಆಯೋಜಿಸಿದ್ದ ಎರಡು ದಿನಗಳ ನಾಗರಿಕ ಸೇವಾ ಪರೀಕ್ಷೆಗಳ ತರಬೇತಿ ಕಾರ್ಯಾಗಾರವನ್ನು ಇನ್ಸೈಟ್ ಐಎಎಸ್ ಅಕಾಡೆಮಿ ಸಂಸ್ಥಾಪಕ ನಿರ್ದೇಶಕ ವಿನಯ್ ಕುಮಾರ್ ಜಿ. ಬಿ. ಉದ್ಘಾಟಿಸಿದರು. (12-07-2024)
ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಬೆಂಗಳೂರಿನ ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಹಾಗೂ ತುಮಕೂರು ಜಿಲ್ಲಾ ಚೇಂಬರ್ಸ್ ಆಫ್ ಕಾಮರ್ಸ್ ಇವರ ಸಹಯೋಗದಲ್ಲಿ ವಾಣಿಜ್ಯಶಾಸ್ತ್ರ ಅಧ್ಯಯನ ಮತ್ತು ಮಾಹಿತಿ ವ್ಯವಸ್ಥೆ ಅಧ್ಯಯನ ವಿಭಾಗಗಳ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಏಳು ದಿನಗಳ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಉದ್ಘಾಟಿಸಿದರು. ನಾಹಿದಾ ಜಮ್ ಜಮ್, ಪ್ರೊ. ಬಿ. ಶೇಖರ್, ಪ್ರೊ. ಪರಮಶಿವಯ್ಯ, ಟಿ. ಜೆ. ಗಿರೀಶ್, ಅಭಿಷೇಕ್ ಬಿ. ಎ., ಶ್ರವಣ್, ರವಿಶಂಕರ್ ಇದ್ದಾರೆ. (11-07-2024)